ಕಾರವಾರ: ಉತ್ತರ ಕನ್ನಡದ ಬೇರೆ ಬೇರೆ ಕಡೆಗಳಿಂದ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಆತ ಜೀವನಕಟ್ಟಿಕೊಳ್ಳಲು ಸಾಲ ಮಾಡಿಕೊಂಡಿದ್ದ. ಆದರೆ, ಸಾಲ ತೀರಿಸಲಾಗದೆ ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಇಲ್ಲಿನ ಚಿತ್ತಾಕುಲಾ ನಾಕುದಾಮೊಹಲ್ಲಾದ ಮಹದ್ ಶಫೀಕ್ ಸಾವಿಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ.
ಈತ ತನ್ನ ಪತ್ನಿ ಸಮೀರಾಳಿಗೆ ವಿಡಿಯೋ ಕರೆ ಮಾಡುತ್ತಲೇ ಮನೆಯ ಪಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.