ದರ್ಗಾಕ್ಕೆ ಹಾನಿ ಪ್ರಕರಣಕ್ಕೆ ಸಂಭದಿಸಿದಂತೆ ಮೂವರನ್ನು ಬಂಧಿಸಿದ ಪೊಲೀಸರು

ಉತ್ತರಕನ್ನಡ(ಕಾರವಾರ): ಇಲ್ಲಿನ ಕಣಸಗಿರಿ ಬಂದರವಾಡದಲ್ಲಿರುವ ದರ್ಗಾಕ್ಕೆ ಕಿಡಿಗೇಡಿಗಳು ಕೆಲ ದಿನಗಳ ಹಿಂದೆ ಪ್ರವೇಶ ಮಾಡಿ ಧಾರ್ಮಿಕ ಭಾವನೆಗೆ ದಕ್ಕೆಯುಂಟಾಗುವoತೆ ಮಾಡಿದ್ದರು. ಇದೀದ ಬಂಧಿಸಲಾಗಿದ್ದು,ಕೃತ್ಯಕ್ಕೆ ಬಳಸಿದ 2 ಸುತ್ತಿಗೆ, ಒಂದು ಕಾರ್ ಹಾಗೂ ಒಂದು ಮೋಟಾರ ಸೈಕಲ್‌ನ್ನು ವಶಕ್ಕೆ ಪಡೆಯಲಾಗಿದೆ. ಮಹೇಂದ್ರ ಮಂಗೇಶ್ ರಾಣಿ ,ವಿನಾಯಕ್ ಕಾಶಿನಾಥ್ ಸಾವಂತ್ ಹಾಗೂ ಮುರಳಿಧರ್ ದೇವರಾಜ್ ಗೋವೇಕರ್ ಬಂಧಿತ ಆರೋಪಿಗಳು.

ಆರೋಪಿತರು ದರ್ಗಾಕ್ಕೆ ಪ್ರವೇಶಿಸಿ ಹಸಿರು ಬಾವುಟಕ್ಕೆ ಬೆಂಕಿ ಹಚ್ಚಿ ಭಾಗಶಃ ಸುಡುವಂತೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ದರ್ಗಾದ ಗೋಡೆಗಳನ್ನು ಕೆಡವಿ ಹಾಗೂ ಕಬ್ಬಿಣದ ಗ್ರಿಲ್ ಮತ್ತು ಗೇಟನ್ನು ಭಾಗಶಃ ಹಾಳು ಮಾಡಿ ದರ್ಗಾದ ಮಜರ್ ಅನ್ನು ಒಡೆದು ಹಾಕಿ ಅದರ ಮೇಲೆ ಹೊದಿಸಿದ ಹಸಿರು ಗಲೀಪನ್ನು ತೆಗೆದು ಹಾಕಿದ್ದರು. ಈ ಕುರಿತು ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ.

WhatsApp
Facebook
Telegram
error: Content is protected !!
Scroll to Top