ಉಡುಪಿ : ಹಿಜಾಬ್ ವಿವಾದದ ಬಗ್ಗೆ ಹೈಕೋರ್ಟ್ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ಮಾ.15 ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಎರಡೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಅನ್ವಯ ಆಗಲಿದೆ. ಆದರೆ ಪರೀಕ್ಷೆ ನಡೆಯುತ್ತಿರುವ ಕಾಲೇಜುಗಳಿಗೆ ರಜೆಯಿಂದ ವಿನಾಯ್ತಿ ನೀಡಲಾಗಿದೆ. ಆಂತರಿಕ ಪರೀಕ್ಷೆ ಆಗಿದ್ದರೆ ರಜೆ ನೀಡಲು ಸೂಚನೆ ನೀಡಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲ್ಪಡುವ ಪದವಿ ಕಾಲೇಜುಗಳ ಪ್ರಾಧ್ಯಾಪಕರ ಹುದ್ದೆಯ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ದ.ಕ. ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.