ಕರ್ನಾಟಕದ ಸದ್ಯದ ಪರಿಸ್ಥಿತಿಗೆ ಕಾಂಗ್ರೆಸ್ ಕಾರಣ: ಎಚ್‌ಡಿ ಕುಮಾರಸ್ವಾಮಿ ನೇರ ಆರೋಪ

ಕಾಂಗ್ರೆಸ್‌ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದು, ಕರ್ನಾಟಕದ ಸದ್ಯದ ಪರಿಸ್ಥಿತಿಗೆ ಕಾಂಗ್ರೆಸ್ಸೇ ಕಾರಣ ಎಂದು ಕಿಡಿಕಾರಿದ್ದಾರೆ. ಕರ್ನಾಟಕ ಶಾಂತಿಯ ತೋಟ ಹಾಳು ಮಾಡಬೇಡಿ. ಇಂತಹ ವ್ಯಕ್ತಿಗಳನ್ನು ಬಹಿಷ್ಕಾರ ಮಾಡಿ ಎಂದು ಯುವಕರಿಗೆ ಎಚ್‌ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಬೆಂಗಳೂರು: ಕರ್ನಾಟಕದಲ್ಲಿ ಸದ್ಯದ ಪರಿಸ್ಥಿತಿಗೆ ಜೆಡಿಎಸ್ ಆಗಲಿ ಅಥವಾ ಎಚ್‌ ಡಿ ಮುಮಾರ್‌ ಸ್ವಾಮಿ  ಕಾರಣ ಅಲ್ಲ ಬದಲಾಗಿ ಕಾಂಗ್ರೆಸ್ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ನಾಯಕರ ತೀರ್ಮಾನಗಳು ಮತ್ತು ಕಾಂಗ್ರೆಸ್‌ನವರು ಜೆಡಿಎಸ್‌ಗೆ ಕೊಟ್ಟ ಕಿರುಕುಳದ ಕಾರಣದಿಂದ ಈ ನಾಡಿನ ಜನರು ಈ ಪರಿಸ್ಥಿತಿ ಅನುಭವಿಸಲಿಕ್ಕೆ ಒಂದು ಕಡೆ ಕಾಂಗ್ರೆಸ್. ಮತ್ತೊಂದು ಕಡೆ ಬಿಜೆಪಿಯವರು ಕಾರಣ”ಎಂದು ಆರೋಪಿಸಿದರು.

“ಹಿಂದೂ ಯುವಕರಿಗೆ ಕೈ ಮುಗಿದು ಹೇಳುತ್ತೇನೆ ರಾಜ್ಯ ಹಾಳು ಮಾಡಿಕೊಳ್ಳಬೇಡಿ. ಯಾರು ಶಾಶ್ವತ ಅಲ್ಲ. ಕರ್ನಾಟಕ ಶಾಂತಿಯ ತೋಟ ಹಾಳು ಮಾಡಬೇಡಿ. ಇಂತಹ ವ್ಯಕ್ತಿಗಳನ್ನು ಬಹಿಷ್ಕಾರ ಮಾಡಿ” ಎಂದು ಮನವಿ ಮಾಡಿದರು.

“ಈದ್ಗಾ ಮೈದಾನದ ಹೆಸರಲ್ಲಿ ಹಲವಾರು ಮಕ್ಕಳನ್ನು ಬಲಿ ತಗೊಂಡಿರಿ. ದೇವೇಗೌಡರು ಸಿಎಂ ಆಗುವ ತನಕ ಪ್ರತಿವರ್ಷ ಒಬ್ಬರು, ಇಬ್ಬರನ್ನು ಬಲಿ ಪಡೆಯುತ್ತಾ ಇದ್ದರು. ಈದ್ಗಾ ವಿಚಾರವನ್ನು ದೇವೇಗೌಡರು ಸರಿ ಮಾಡಿದ್ದರು. ಇದೀಗ ಇವರು ಹೀಗೆ ಮಾಡಲು ಕಾಂಗ್ರೆಸ್ ಕಾರಣ. ಈ ಸರ್ಕಾರ ಬರಲು ಕಾಂಗ್ರೆಸ್ ಕಾರಣ” ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಉದ್ಭವ ಆಗಲು ಕಾಂಗ್ರೆಸ್ ಒಂದು ಕಡೆ , ಬಿಜೆಪಿ ಒಂದು ಕಡೆ ಕಾರಣವಾಗಿದೆ. ಕನ್ನಡಿಗರೇ ದಾರಿ ತಪ್ಪಬೇಡಿ. ಹೊಟ್ಟೆಗೆ ತಿನ್ನಲು ಏನೂ ಕೊಡಬೇಡಿ ಹೊಟ್ಟೆಗೆ ತಣ್ಣೀರು ಬಟ್ಟೆ. ಹಿಂದು ದೇವಸ್ಥಾನಕ್ಕೆ ದಲಿತರನ್ನು ಪೂಜೆ ಮಾಡಲು ಬಿಡುತ್ತೀರಾ? ದೇವಸ್ಥಾನ ಕಟ್ಟುವವರು ಓಬಿಸಿ , ದಲಿತರು, ದೇವಸ್ಥಾನದ ಒಳಗೆ ಕೂತುಕೊಂಡು ಆಸ್ತಿ ಹೊಡೆಯುವವರು ನೀವುಗಳು. ನೀವು ಮಜಾ ಮಾಡುವವರು ಎಂದು ಎಚ್‌ಡಿ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಟೀಕಿಸಿದರು.

ಇವರು ಈ ದೇಶ ಉಳಿಸುವವರಲ್ಲ ಬದಲಾಗಿ ಅಮಾಯಕರು ದೇಶ ಉಳಿಸಿದರು. ಯುವಕರಿಗೆ ಹೇಳುತ್ತೇನೆ ಯಾರು ಯುವಕರು ಇದಕ್ಕೆ ಬಲಿಯಾಗಬೇಡಿ. ಇದರಿಂದ ನಿಮ್ಮ ಭವಿಷ್ಯ ರೂಪಿಸಲು ಆಗುವುದಿಲ್ಲ. ಹಿಂದೂ ಯುವಕರಿಗೆ ಕೈ ಮುಗಿದು ಹೇಳುತ್ತೇನೆ ರಾಜ್ಯ ಹಾಳು ಮಾಡಿಕೊಳ್ಳಬೇಡಿ. ಅವರು ಮಣ್ಣಿಗೆ ಹೋಗುವವರು, ನಾವು ಮಣ್ಣಿಗೆ ಹೋಗುವವರೇ. ಕರ್ನಾಟಕ ಶಾಂತಿಯ ತೋಟ ಹಾಳು ಮಾಡಬೇಡಿ ಎಂದು ಕುಮಾರಸ್ವಾಮಿ ಮನವಿ ಮಾಡಿದರು.

ಇತ್ತೀಚೆಗೆ ಕೋಲಾರದಲ್ಲಿ ಮಾತನಾಡಿದ್ದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಿಡಿಕಾರಿದ್ದರು. ಕಾಂಗ್ರೇಸ್ ಮತ್ತು ಬಿಜೆಪಿಗೆ ಕರ್ನಾಟಕದ ಜನರ ನೆಮ್ಮದಿ ಬೇಕಿಲ್ಲ. ಎರಡು ಪಕ್ಷಗಳು ಕೋಮು ಸೌಹಾರ್ದತೆಯ ಹೆಸರಲ್ಲಿ ಮತಕ್ಕಾಗಿ ಕಾರ್ಯ ಮಾಡುತ್ತಿವೆ. ಧರ್ಮ ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಕರ್ನಾಟಕದಲ್ಲಿ ಹಿಜಾಬ್‌ ವಿವಾದ, ಬಳಿಕ ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ, ಟಿಪ್ಪು ವಿಷಯವನ್ನು ಪಠ್ಯದಿಂದ ಕೈ ಬಿಡುವುದು, ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮರ ಅಂಗಡಿಗಳಿಗೆ ನಿಷೇಧ, ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಸೇರಿ ಅನೇಕ ವಿಷಯಗಳ ಬಗ್ಗೆ ನಿರಂತರ ಚರ್ಚೆಯಾಗುತ್ತಿದ್ದು, ಮೂರು ಪಕ್ಷಗಳ ನಾಯಕರ ನಡುವೆ ವಾಕ್ಸಮರ ನಡೆಯುತ್ತಿದೆ.

WhatsApp
Facebook
Telegram
error: Content is protected !!
Scroll to Top