ಹೊನ್ನಾವರ ಪರೇಶ ಮೆಸ್ತಾ ಸಾವು ಕೊಲೆಯಲ್ಲ ಆಕಸ್ಮಿಕ ಸಾವು

ಸಿ ಬಿ ಐ ಇಂದ ಹೊನ್ನಾವರ ನ್ಯಾಯಾಲಯಕ್ಕೆ ಬಿ ರಿಪೋರ್ಟ ಸಲ್ಲಿಕೆ

ಐದು ವರ್ಷಗಳ ಹಿಂದೆ ನಡೆದಿದ್ದು ದೊಡ್ಡ ಡ್ರಾಮ ವೇ ?

ಹೊನ್ನಾವರ- ಕಳೆದ ಐದು ವರ್ಷಗಳ ಹಿಂದೆ ಉತ್ತರ ಕನ್ನಡಜಿಲ್ಲೆಯ ಹೊನ್ನಾವರದಲ್ಲಿ ತಾಲೂಕಿನಲ್ಲಿ ಮೃತಪಟ್ಟಿದ್ದ ಪರೇಶ್ ಮೇಸ್ತಾ ಸಾವಿನ ಪ್ರಕರಣದಲ್ಲಿ ಸಿಬಿಐ ‘ಬಿ’ ರಿಪೋರ್ಟ್ (B Report)ಸಲ್ಲಿಸಿದೆ.

2017ರ ಡಿಸೆಂಬರ್ 6ರಂದು ಹೊನ್ನಾವರದಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ಎಂಟರಂದು ಹೊನ್ನಾವರ ನಗರದ ಶನಿದೇವಾಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಮೇಸ್ತಾ ಶವವಾಗಿ ಪತ್ತೆಯಾಗಿದ್ದ. ಯುವಕನನ್ನು ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆಂದು  ಬಿಜೆಪಿಗರು ಆರೋಪಿಸಿದ್ದರು. ಮೇಸ್ತಾನನ್ನು ಬಿಜೆಪಿಗರು , ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ್ದರಿಂದ ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿತ್ತು.

ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಅಂದು ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು. ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಐವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ವಿಸ್ತೃತ ತನಿಖೆ ನಡೆಸಿ ನಾಲ್ಕೂವರೆ ವರ್ಷದ ನಂತರ ಸಿಬಿಐ ಹೊನ್ನಾವರ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ.

ಸಿಬಿಐ ಸಲ್ಲಿಸಿರುವ ವರದಿಯಲ್ಲಿ, ಪರೇಶ್ ಮೇಸ್ತಾ ಹತ್ಯೆ ನಡೆದಿಲ್ಲ. ಇದೊಂದು ಆಕಸ್ಮಿಕ ಸಾವು ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ. ಇಂದು ಸಿಬಿಐ ಸಲ್ಲಿಸಿರುವ ವರದಿ ಪರಿಶೀಲಿಸಿದ ಹೊನ್ನಾವರ ನ್ಯಾಯಾಲಯ, ನವೆಂಬರ್ 16ಕ್ಕೆ ತೀರ್ಪು ಮುಂದೂಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿಸಿ ಬಿಸಿ ಚರ್ಚೆಯ ವಿಷಯವಾಗಿದ್ದ  ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನ ಈ ಬಾರಿ ಕಾಂಗ್ರೆಸ್ ಬಳಸಿಕೊಳ್ಳಲಾರಂಭಿಸಿದ್ದು, ಐದು ವರ್ಷ ಕಳೆದರೂ, ರಾಜ್ಯ- ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದರೂ‌ ಪ್ರಕರಣ ತಾರ್ಕಿಕ ಅಂತ್ಯ ಕಂಡಿಲ್ಲ ಎಂಬುದನ್ನು ಕೆದಕಲಾರಂಭಿಸಿದೆ.

ಪರೇಶ್ ಮೇಸ್ತಾ ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದ. ಕೋಮು ದ್ವೇಷದಿಂದಲೇ ಕೊಲೆ ಮಾಡಿರುವುದಾಗಿ ಬಿಜೆಪಿ ನಾಯಕರು, ಕಾರ್ಯಕರ್ತರು ಬೀದಿಗಿಳಿದು ಅಂದು ಬೃಹತ್ ಹೋರಾಟ, ಪ್ರತಿಭಟನೆಗಳನ್ನ ನಡೆಸಿದ್ದರು. ಅಂದಿನ ಕಾಂಗ್ರೆಸ್ ಸರ್ಕಾರಕ್ಕೂ ಈ ಪ್ರಕರಣ ಮುಜುಗರ ತಂದಿತ್ತು. ನಂತರದ ಬೆಳವಣಿಗೆಯಲ್ಲಿ ಸಿಬಿಐ ತನಿಖೆಗೆ ಈ ಪ್ರಕರಣವನ್ನ ವಹಿಸಲಾಗಿತ್ತು. ಸದ್ಯ ಇದೇ ಪ್ರಕರಣ ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಜೀವ ಪಡೆದುಕೊಂಡಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಪ್ರಕರಣವನ್ನ ಮುನ್ನೆಲೆಗೆ ತಂದಿದೆ.

ಪರೇಶ್ ಮೇಸ್ತಾ ಸಾವಿನ ನಂತರ ಮಣಿಪಾಲಿನ ವೈದ್ಯರು ನಡೆಸಿದ್ದ ಮರಣೋತ್ತರ ಪರೀಕ್ಷಾ ವರದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಹಜ ಸಾವು ಎಂದು ವರದಿಯಲ್ಲಿದೆ. ಆದರೂ ಬಿಜೆಪಿ ಇದನ್ನು ಒಪ್ಪಿಕೊಂಡಿಲ್ಲ. ಮಣಿಪಾಲ ವೈದ್ಯರೇ ಸುಳ್ಳು ಮರಣೋತ್ತರ ಪರೀಕ್ಷೆ ವರದಿ ನೀಡಿದ್ದರೆ ಅವರ ವಿರುದ್ಧವೇ ಕ್ರಿಮಿನಲ್ ಪ್ರಕರಣ ದಾಖಲಿಸಲಿ. ಅದನ್ನ ಬಿಟ್ಟು ಪ್ರಕರಣ ಇನ್ನು ಜೀವಂತ ಇಟ್ಟು ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಿಜೆಪಿಗರ ವಿರುದ್ಧ ಕಿಡಿಕಾರಿದ್ದಾರೆ. ಈ ನಡುವೆ ಸಿಬಿಐ ಈಗ ಬಿ ರಿಪೋರ್ಟ್‌ ಸಲ್ಲಿಸಿದೆ.

ಒಟ್ಟಾರೆ ಇಷ್ಟು ದಿನ ಪರೇಶ ಮೆಸ್ತಾ ಸಾವಿನ ಪ್ರಕರಣ ಬಿಜೆಪಿಗರಿಗೆ ವೊಟ್ ಬ್ಯಾಂಕಿಗೆ ಆಹಾರವಾಗಿದ್ದ ಪ್ರಕರಣ ಇನ್ನು ಮುಂದೆ ಬಿಜೆಪಿಗರಿಗೆ ಮುಳುವಾಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ ಆದರೆ ಇದು ಕಾಂಗ್ರೇಸಿಗರು ಈ ಪ್ರಕ

WhatsApp
Facebook
Telegram
error: Content is protected !!
Scroll to Top