ಸಾಮಾಜಿಕ ಜಾಲತಾಣದ ವಿಕ್ರತರ ವಿರುದ್ಧ ಭಟ್ಕಳ ನಾಮಧಾರಿ ಸಮಾಜದ ಮಹಿಳೆಯರ ಆಕ್ರೋಶ

ಈ ಸಮಾಜ ಘಾತುಕರ ವಿರುದ್ದ ಕ್ರಮ ಕೈಗೊಳ್ಳಿ ಇಲ್ಲವಾದಲ್ಲಿ ನಾವು ಪ್ರತಿಭಟನೆಗೆ ಇಳಿಯ ಬೇಕಾಗುತ್ತದೆ .

ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ತಮ್ಮ ರಾಜಕೀಯ ಲಾಭಕ್ಕಾಗಿ ನಾಮಧಾರಿ ಸಮಾಜದ ಮಹಿಳೆಯರು ಸೇರಿದಂತೆ ವಿವಿಧ ಜಾತಿ ಧರ್ಮ ಪಕ್ಷಗಳ ನಾಯಕರ ಕಾರ್ಯಕರ್ತರ ಮನೆಯ ಹೆಣ್ಣು ಮಕ್ಕಳನ್ನು ತೇಜೋವಧೆ ಮಾಡುತ್ತಿರುವುದನ್ನು ಖಂಡಿಸಿ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ನಾಮಧಾರಿ ಸಮಾಜದ ಮಹಿಳೆಯರು ನ ಭಟ್ಕಳದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಿ ಆಕ್ರೋಶ ವ್ಯಕ್ತಪಡಿಸಿದರು

ವಿಕೃತ ಮನಸ್ಸಿನ ವ್ಯಕ್ತಿಗಳ ವಿರುದ್ಧ ಸೂಕ್ತವಾದ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನು ಆಗ್ರಹಿಸಿದರು.

ಕೆಲವು ವರ್ಷಗಳಿಂದ ಅಂಥಾ ವಿಕೃತ ಮನಸ್ಸಿನ ವ್ಯಕ್ತಿಗಳು ನನ್ನ ಮನೆಯ ಹೆಣ್ಣು ಮಕ್ಕಳನ್ನೂ ಕೂಡಾ ತಮ್ಮ ರಾಜಕೀಯ ಲಾಭಕ್ಕಾಗಿ ನಿರಂತರವಾಗಿ ಸಾಮಾಜಿಕ ತಾಣಗಳಲ್ಲಿ ತೇಜೋವಧೆ ಮಾಡುತ್ತಿದ್ದಾರೆ.
ಅಂಥಾ ವಿಕೃತ ಮನಸ್ಸಿನ ವ್ಯಕ್ತಿಗಳಿಂದ ನಮ್ಮ ಮನೆಯ ಹೆಣ್ಣು ಮಕ್ಕಳಷ್ಟೇ ಅಲ್ಲದೇ ಹಲವಾರು ಮನೆಯ ಹೆಣ್ಣು ಮಕ್ಕಳು ಕೂಡಾ ತೇಜೋವಧೆಗೆ ಒಳಗಾಗಿದ್ದಾರೆ. ಈ ಬಗ್ಗೆ ಶಾಸಕ ಸುನಿಲ್ ನಾಯ್ಕ ಹಾಗು ಅಧಿಕಾರಿಗಳ ಗಮನಕ್ಕೆ ತಂದರೂ ಕೂಡಾ ಯಾವುದೆ ಕ್ರಮ ಕೈಗೊಂಂಡಿಲ್ಲಾ ಕಾರಣ ಇದಕ್ಕೆ ಶಾಸಕರು ಮತ್ತು ಅಧಿಕಾರಿಗಳೆ ನೇರ ಹೊಣೆಯಾಗಿರುತ್ತಾರೆ ಇದು ನಿಲ್ಲದಿದ್ದಲ್ಲಿ ನಾವು ಬ್ರಹತ್ ಪ್ರತಿಭಟನೆ ಕೈಗೊಳ್ಳುತ್ತೆವೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ನಾಮದಾರಿ ಸಮಾಜದ ಮಹಿಳೆಯರು ಉಪಸ್ಥಿತರಿದ್ದರು

WhatsApp
Facebook
Telegram
error: Content is protected !!
Scroll to Top