ಭಟ್ಕಳ ಪ್ರತಿಷ್ಟಿತ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಸಂಪುಟ ದರ್ಜೆಯ ಸಚಿವರಾದ ಮಂಕಾಳ ಎಸ್ ವೈದ್ಯರವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಸಂಸ್ಥೆಯ ಸಂಗೀತ ಶಿಕ್ಷಕಿಯಾದ ರಂಜಿತಾ ಸಂಗಡಿಗರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಇದೆ ಸಂದರ್ಭದಲ್ಲಿ ಸಚಿವರು ಮತ್ತು ಅವರ ಪತ್ನಿ ಶ್ರೀಮತಿ ಡಾ. ಪುಷ್ಪಲತಾ ಎಂ ವೈದ್ಯರವರನ್ನು ಸನ್ಮಾನಿಸಿ ಸಚಿವರು ವಿಶ್ವ ಪರಿಸರ ದಿನಾಚರಣೆಯ ಕುರಿತು ವಿದ್ಯಾರ್ಥಿಗಳಿಗೆ ಸಂದೇಶವನ್ನು ನೀಡುತ್ತಾ ಪರಿಸರವನ್ನು ಉಳಿಸಿ ಬೆಳೆಸಬೇಕು ಹಾಗೂ ವಿದ್ಯಾರ್ಜನೆಯಲ್ಲಿ ಸದಾ ಮುಂದಿರಬೇಕೆಂದು ರಾಜ್ಯದ, ರಾಷ್ಟ್ರದ ಕೀರ್ತಿಯನ್ನು ಎಲ್ಲಡೆ ಹರಡಿ ಎಂಬ ಕರೆ ನೀಡಿದರು.
ಈ ಸಭಾ ಕಾರ್ಯಕ್ರಮದಲ್ಲಿ ಬೀನಾ ವೈದ್ಯ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಪೂರ್ಣಿಮಾ ಹೆಬ್ಬಾರ ಮತ್ತು ಕಾಲೇಜು ವಿಭಾಗದ ಪ್ರಾಂಶುಪಾಲರಾದ ಶ್ರೀ ನಯೀಂ ಗೋರಿಯವರು ಹಾಗೂ ಈ ಶಿಕ್ಷಣ ಸಂಸ್ಥ್ಥಯ ಸಂಯೋಜಕರಾದ ಶ್ರೀ ಕೃಷ್ಣಮೂರ್ತಿ ಶೆಟ್ಟಿಯವರು ಉಪಸ್ಥಿತರಿದ್ದರು.
ಕನ್ನಡ ಶಿಕ್ಷಕಿಯಾದ ಜ್ಯೋತಿ ಶೆಟ್ಟಿ ಯವರು ಸರ್ವರನ್ನು ಸ್ವಾಗತಿಸಿದರು. ಶಿಕ್ಷಕಿಯಾದ ಯಮುನಾ ಮೊಗೇರವರು ವಂದನಾರ್ಪಣೆಯನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ನಿರೂಪಣೆಯನ್ನು ಕನ್ನಡ ಉಪನ್ಯಾಸಕಿಯರಾದ ಹೇಮಾವತಿ ನಾಯ್ಕರವರು ನಡೆಸಿಕೊಟ್ಟರು.