ಸಚಿವ ಆರ್ ಅಶೋಕ್ ಅವರು ಕೋವಿಡ್ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ತಮ್ಮ ಸಂಪರ್ಕದಲ್ಲಿ ಬಂದಿರುವವರು ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.
ಸಚಿವ ಆರ್.ಅಶೋಕ್ ಅವರಿಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಕಂದಾಯ ಸಚಿವ ಆರ್.ಅಶೋಕ್ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಸಚಿವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆರ್ ಅಶೋಕ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಹೊರ ಬಂದಿದೆ.
ಕೆಲ ದಿನಗಳ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೂ ಸೋಂಕು ತಗುಲಿತ್ತು. ಕ್ವಾರಂಟೈನ್ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ರು. ಆರ್.ಅಶೋಕ್ ಅವರು ಸಹ ಟ್ವೀಟ್ ಮೂಲಕ ತಮಗೆ ಸೋಂಕು ತಗುಲಿರೋದನ್ನು ದೃಢಪಡಿಸಿದ್ದಾರೆ.
ಪೊಲೀಸ್ ಇಲಾಖೆಯಿಂದ ಯಾವುದೇ ಪಾಸ್ ಕೊಡಲ್ಲ. ಎಲ್ಲಿ ಹೋದ್ರೂ ಸಮರ್ಪಕವಾದ ದಾಖಲೆ ಕೊಡಬೇಕು. ವೀಕೆಂಡ್ ಕರ್ಫ್ಯೂ ವೇಳೆ ಅನಗತ್ಯವಾಗಿ ಓಡಾಡಿದ್ರೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.