5ನೇ ದಿನದ ಪಾದಯಾತ್ರೆ ಕೂಡ ಆರಂಭವಾಗಿದೆ. ಮತ್ತೊಂದೆಡೆ ಈ ಪಾದಯಾತ್ರೆಯಲ್ಲಿ ಭಾಗಿಯಾದವರಲ್ಲಿ ಕೋವಿಡ್ ಸೋಂಕು(Corona Virus) ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ ಬಹುತೇಕರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮ್ಯಾಂಗೋ ಬೋರ್ಡ್ ಮಾಜಿ ಅಧ್ಯಕ್ಷೆ ಎಐಸಿಸಿ ಕಾರ್ಯದರ್ಶಿ ಕಮಲಾಕ್ಷಿ ರಾಜಣ್ಣ ಹಾಗೂ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸಗೆ ಸೋಂಕು ದೃಢಪಟ್ಟಿದೆ
ಕಾಂಗ್ರೆಸ್ ಪಾದಯಾತ್ರ
ನಿನ್ನೆ ಕಾಂಗ್ರೆಸ್(Congress) ಪಾದಯಾತ್ರೆ(Padayatra)ಯನ್ನು ನಿಲ್ಲಿಸಲು ಸರ್ಕಾರ ಆದೇಶ ನೀಡಿತ್ತು. ಕಾಂಗ್ರೆಸ್ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದೆ. ಕೊರೋನಾ(Corona) ಸಂದಿಗ್ಧ ಕಾಲದಲ್ಲಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಂಡಿಲ್ಲ ಅಂತ ನಿನ್ನೆ ಹೈಕೋರ್ಟ್, ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಇಂದು ಕೂಡಾ ಪಾದಯಾತ್ರೆ ಮುಂದುವರಿಸುತ್ತೇವೆ ಅಂತ ಹೇಳಿಕೆಗಳನ್ನ ನೀಡಿದ್ದಾರೆ. ಅಲ್ಲದೇ ಕೆಪಿಸಿಸಿ ಅಧ್ಷಕ್ಷ ಡಿಕೆ ಶಿವಕುಮಾರ್ (DK Shivakumar) ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ. 5ನೇ ದಿನದ ಪಾದಯಾತ್ರೆ ಕೂಡ ಆರಂಭವಾಗಿದೆ. ಮತ್ತೊಂದೆಡೆ ಈ ಪಾದಯಾತ್ರೆಯಲ್ಲಿ ಭಾಗಿಯಾದವರಲ್ಲಿ ಕೋವಿಡ್ ಸೋಂಕು(Corona Virus) ಪತ್ತೆಯಾಗುತ್ತಿರುವುದು ಆತಂಕ ಮೂಡಿಸಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ ಬಹುತೇಕರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮ್ಯಾಂಗೋ ಬೋರ್ಡ್ ಮಾಜಿ ಅಧ್ಯಕ್ಷೆ ಎಐಸಿಸಿ ಕಾರ್ಯದರ್ಶಿ ಕಮಲಾಕ್ಷಿ ರಾಜಣ್ಣ ಹಾಗೂ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸಗೆ ಸೋಂಕು ದೃಢಪಟ್ಟಿದೆ. ಇನ್ನೂ ಈ ನಾಯಕಿರು ಪಾದಯಾತ್ರೆಯಲ್ಲಿ ನೂರಾರು ಜನರೊಂದಿಗೆ ಹೆಜ್ಜೆ ಹಾಕಿದ್ದರು. ಹೀಗಾಗಿ ಇವರ ಸಂಪರ್ಕಕ್ಕೆ ನೂರಾರು ಜನರು ಬಂದಿದ್ದಾರೆ. ಸದ್ಯಕ್ಕೆ ಇವರೆಲ್ಲ ಹೋಮ್ ಕ್ವಾರಂಟೈನ್ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾದಯಾತ್ರೆ ಮೊದಲ ದಿನದಿಂದಲೂ ಸಖತ್ ಆ್ಯಕ್ಟೀವ್ ಆಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಏರು ಪೇರು ಉಂಟಾಗಿದೆ. ಹೀಗಾಗಿ ಅವರು ಕೂಡು ಕೋವಿಡ್ ಟೆಸ್ಟ್ ಮಾಡಲಿದೆ.
ಪಾದಯಾತ್ರೆಯಲ್ಲಿ ಭಾಗಿಯಾದವರಿಗೆ ಸೋಂಕು!
ಹೌದು, ಇದು ಕಾಂಗ್ರೆಸ್ ಪಾದಯಾತ್ರೆ ಅಲ್ಲ.. ಸೋಂಕಿನ ಪಾದಯಾತ್ರೆ ಆಗಿದೆ. ಈ ಪಾದಯಾತ್ರೆಯಲ್ಲಿ ಭಾಗಿಯಾದ ಹಲವರಿಗೆ ಸೋಂಕು ವಕ್ಕರಿಸಿದೆ. ಅಷ್ಟೇ ಅಲ್ಲ, ಮಲ್ಲಿಕಾರ್ಜುನ ಖರ್ಗೆ ಅವರಿಗೂ ಸೋಂಕು ಅಂಟಿದೆ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆಯಿಂದ ಮತ್ತಷ್ಟು ಸೋಂಕು ಹೆಚ್ಚುವ ಆತಂಕ ಎದುರಾಗಿದೆ. ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ರಾಜ್ಯ ಹೈಕೋರ್ಟ್ ಗರಂ ಆಗಿದ್ದು, ಕರೋನಾ ಇರೋವಾಗ ಏನಿದೆಲ್ಲಾ ಹುಡುಗಾಟ ಎಂಬ ಧಾಟಿಯಲ್ಲಿ ತೀವ್ರ ಅಸಮಾಧಾನ ಹೊರಹಾಕಿದೆ. ಕೋರ್ಟ್ ನೋಟಿಸ್ ಕೈಯಲ್ಲಿ ಹಿಡಿದು, ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ರಾಜ್ಯ ಸರ್ಕಾರ ಸೆಟೆದು ನಿಂತಿದೆ.
ಪಾದಯಾತ್ರೆ ನಿಲ್ಲಿಸುವಂತೆ ಸೋನಿಯಾ ಗಾಂಧಿ ಸೂಚನೆ!
ಹೀಗೆ ಈ ಪಾದಯಾತ್ರೆಯಿಂದ ಸೋಂಕು ಹೆಚ್ಚಿರುವ ಮಾಹಿತಿ ಕಾಂಗ್ರೆಸ್ ಹೈಕಮಾಂಡ್ವರೆಗೂ ಹೋಗಿದೆ. ಕೂಡಲೇ ಪಾದಯಾತ್ರೆ ನಿಲ್ಲಿಸುವಂತೆ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮೂಲಕ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಗಾಂಧಿ ಸೂಚನೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಈಗ ಏನು ಮಾಡುತ್ತಾರೆ ಎಂಬ ಪ್ರಶ್ನೆ ಮೂಡಿದೆ. ಯಾರೇ ಬಂದರೂ ಈ ಪಾದಯಾತ್ರೆ ನಿಲ್ಲಲ್ಲ. ನಾನೊಬ್ಬನೆ ನಡೆದುಕೊಂಡು ಪಾದಯಾತ್ರೆ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು.