Padma Shri Awardees Karnataka: 73 ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರದ ಪ್ರಶಸ್ತಿಗಳಲ್ಲೊಂದಾದ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ.. ದೇಶದ 107 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದ್ದು ಅದರಲ್ಲಿ ರಾಜ್ಯದ ಐವರು ಸಾಧಕರು ಕೂಡ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ. ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್ಗಳ ಸೌಲಭ್ಯಗಳೇ ಇಲ್ಲದ ಕಾಲದಲ್ಲಿ ಹಿಂದಿನ ತಲೆಮಾರಿನವರು ಅವಲಂಭಿಸಿದ್ದ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು ಇವರು ಯಶಸ್ವಿಯಾಗಿದ್ದಾರೆ. ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಟ್ರಿಂಕ್ಲರ್ ನೀರಾವರಿ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿರುವ ಮಾಹಾಲಿಂಗ ನಾಯ್ಕ ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದಿದ್ದಾರೆ.
ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.ಹೊಲೆಮಾದಿಗರ ಹಾಡು’, ‘ಮೆರವಣಿಗೆ’, ‘ಸಾವಿರಾರು ನದಿಗಳು’, ‘ಕಪ್ಪು ಕಾಡಿನ ಹಾಡು’, ‘ನನ್ನ ಜನಗಳು’ ಸೇರಿದಂತೆ ಹಲವು ಕವನ ಸಂಕಲಗಳನ್ನು ಸಿದ್ದಲಿಂಗಯ್ಯ ಅವರು ಹೊರತಂದಿದ್ದಾರೆ. ‘ಊರು-ಕೇರಿ’ ಎಂಬ ಆತ್ಮಕಥನವನ್ನು ಅವರು ರಚಿಸಿದ್ದಾರೆ. ಪಂಪ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಾಡೋಜ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಹಾಗೂ ಗೌರವಗಳು ಅವರಿಗೆ ದೊರೆತಿವೆ.Advertisement
ಕಳೆದ ಹಲವಾರು ದಶಕಗಳಿಂದ ನಿರಂತರವಾಗಿ ಗಮಕ ಕಾರ್ಯಕ್ರಮಗಳನ್ನು ಖ್ಯಾತ ಗಮಕ ಕಲಾವಿದರಾದ ಹೊಸಳ್ಳಿ ಹೆಚ್. ಆರ್. ಕೇಶವಮೂರ್ತಿಯವರು ಭಾರತ ಸರ್ಕಾರ ಕೊಡಮಾಡುವ 2022ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ..
ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ರೈತರು. ಕೃಷಿ ವಿಜ್ಞಾನಿಗಳೆಂದೇ ಪ್ರಸಿದ್ಧಿ ಪಡೆದಿದ್ದಾರೆ. ಬಿತ್ತನೆ ಕೂರಿಗೆ ಸಂಶೋಧನೆಯಿಂದಲೇ ಪರಿಚಿತರಾದವರು
ಬಿತ್ತನೆ ಸಮಯದಲ್ಲಿ ಎದುರಾಗುವ ಸಮಸ್ಯೆ ನಿವಾರಣೆ ಮಾಡುವ ಕೂರಿಗೆ ಸಂಶೋಧಿಸಿ ಪರಿಚಯಿಸಿದರು. ಇದು ಅಲ್ಲದೇ ಅನೇಕ ಕೃಷಿ ಉಪಕರಣ ಕೊಡುಗೆಯಾಗಿ ನೀಡಿದ್ದಾರೆ..Advertisement
ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸಿ ಪದ್ಮಶ್ರಿ ಗೌರವಕ್ಕೆ ಪಾತ್ರರಾದ ಮತ್ತೂಬ್ಬ ಸಾಧಕ ಸುಬ್ಬಣ್ಣ ಅಯ್ಯಪ್ಪನ್ ಅವರದ್ದು ಬೆಂಗಳೂರು ಮೂಲ.. ನ್ಯಾಶನಲ್ ಅಕಾಡೆಮ್ ಆಫ್ ಅಗ್ರಿಕಲ್ಪರಲ್ ಸೈನ್ಸ್ ನ ಸ್ಕಾಲರ್ ಕೃಷಿ ವಿಜ್ಞಾನಿ ಎಸ್. ಅಯ್ಯಪನ್ ಜಿಯಾಲೋಜಿಲ್ ಸೊಸೈಟಿಯಿಂದ ಚಿನ್ನದ ಪದಕಕ್ಕೆ ಭಾಜನವಾರದರು. ಜೀವ ವಿಜ್ಞಾನ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದ್ದಾರೆ.