BSY: ಆತ್ಮಹತ್ಯೆಗೆ ಶರಣಾದ ಮಾಜಿ ಸಿಎಂ ಬಿಎಸ್​ವೈ ಮೊಮ್ಮಗಳು

ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಸೌಂದರ್ಯ ಮೃತ ದುರ್ದೈವಿ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದ ಹಿನ್ನಲೆ ಅವರು ಈ ಕೃತ್ಯಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಈ ಘಟನೆ ಸಂಬಂಧ ಹೈಗ್ರೌಂಡ್ಸ್​ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆಗೆ ಮುಂದಾಗಿದ್ದಾರೆ.

 ಯಡಿಯೂರಪ್ಪ ಅವರ ಮಗಳಾದ ಪದ್ಮ ಶಿವಕುಮಾರ್  ಮಗಳು ಸೌಂದರ್ಯ ಆತ್ಮಹತ್ಯೆ ನಿರ್ಧಾರ ಕೈಗೊಂಡ ದುರ್ದೈವಿ. ಮೌಂಟ್ ಕಾರ್ಮೆಲ್ ಕಾಲೇಜ್ ಬಳಿ ಇರುವ ಫ್ಲಾಟ್ ನಲ್ಲಿ  ಈ ಘಟನೆ ನಡೆದಿದೆ

ಯಡಿಯೂರಪ್ಪ ಅವರ ಮಗಳಾದ ಪದ್ಮ ಶಿವಕುಮಾರ್  ಮಗಳು ಸೌಂದರ್ಯ ಆತ್ಮಹತ್ಯೆ ನಿರ್ಧಾರ ಕೈಗೊಂಡ ದುರ್ದೈವಿ. ಮೌಂಟ್ ಕಾರ್ಮೆಲ್ ಕಾಲೇಜ್ ಬಳಿ ಇರುವ ಫ್ಲಾಟ್ ನಲ್ಲಿ  ಈ ಘಟನೆ ನಡೆದಿದೆ

 ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಕಳೆದ ಕೆಲವು ದಿನಗಳ ಹಿಂದೆ ಖಿನ್ನತೆಗೆ ಜಾರಿದ್ದರು.

ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಸೌಂದರ್ಯ ಕಳೆದ ಕೆಲವು ದಿನಗಳ ಹಿಂದೆ ಖಿನ್ನತೆಗೆ ಜಾರಿದ್ದರು.

 ಈ ಹಿನ್ನಲೆ ಅವರು ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು, ಅವರಿಗೆ ಒಂದು ಒಂಭತ್ತು ತಿಂಗಳ ಪುಟ್ಟ ಮಗು ಕೂಡ ಇದೆ. ಕಳೆದ ಮೂರು ವರ್ಷದ ಹಿಂದೆ ಸೌಂದರ್ಯ- ನೀರಜ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು

ಈ ಹಿನ್ನಲೆ ಅವರು ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು, ಅವರಿಗೆ ಒಂದು ಒಂಭತ್ತು ತಿಂಗಳ ಪುಟ್ಟ ಮಗು ಕೂಡ ಇದೆ. ಕಳೆದ ಮೂರು ವರ್ಷದ ಹಿಂದೆ ಸೌಂದರ್ಯ- ನೀರಜ್​ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು

 ಸೌಂದರ್ಯ ಪತಿ ನೀರಜ್​ ಕೂಡ ವೈದ್ಯರಾಗಿದ್ದರು. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ರೆಡಿಯೋಲಾಜಿಸ್ಟ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂದು ಎಂದಿನಂತೆ ಅವರು ಆಸ್ಪತ್ರೆಗೆ ತೆರಳಿದ ಬಳಿಕ ಸೌಂದರ್ಯ ಈ ಕೃತ್ಯಕ್ಕೆ ಮುಂದಾಗಿದ್ದಾರೆ.

ಸೌಂದರ್ಯ ಪತಿ ನೀರಜ್​ ಕೂಡ ವೈದ್ಯರಾಗಿದ್ದರು. ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ರೆಡಿಯೋಲಾಜಿಸ್ಟ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂದು ಎಂದಿನಂತೆ ಅವರು ಆಸ್ಪತ್ರೆಗೆ ತೆರಳಿದ ಬಳಿಕ ಸೌಂದರ್ಯ ಈ ಕೃತ್ಯಕ್ಕೆ ಮುಂದಾಗಿದ್ದಾರೆ.

 ಮನೆಕೆಲಸದವರು ಬಂದು ಎಷ್ಟು ಬಡಿದರೂ ಸೌಂದರ್ಯ ರೂಮಿನ ಬಾಗಿಲು ತೆರೆಯಲಿಲ್ಲ ಬಳಿಕ ನೀರಜ್​ಗೆ ಕರೆ ಮಾಡಿದ್ದಾರೆ. ಆಸ್ಪತ್ರೆಯಿಂದ ಬಂದ ವೈದ್ಯ ನೀರಜ್​ ಬಾಗಿಲು ಮುರಿದ ಒಳ ಹೋದಾಗ ಅವರು ಫ್ಯಾನ್​ಗೆ ನೇಣು ಹಾಕಿಕೊಂಡಿದ್ದರು.

ಮನೆಕೆಲಸದವರು ಬಂದು ಎಷ್ಟು ಬಡಿದರೂ ಸೌಂದರ್ಯ ರೂಮಿನ ಬಾಗಿಲು ತೆರೆಯಲಿಲ್ಲ ಬಳಿಕ ನೀರಜ್​ಗೆ ಕರೆ ಮಾಡಿದ್ದಾರೆ. ಆಸ್ಪತ್ರೆಯಿಂದ ಬಂದ ವೈದ್ಯ ನೀರಜ್​ ಬಾಗಿಲು ಮುರಿದ ಒಳ ಹೋದಾಗ ಅವರು ಫ್ಯಾನ್​ಗೆ ನೇಣು ಹಾಕಿಕೊಂಡಿದ್ದರು.

 ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ. ಮೊಮ್ಮಗಳು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಬಿಎಸ್​​ ಯಡಿಯೂರಪ್ಪ ಮತ್ತು ಸಿಎಂ ಸೇರಿದಂತೆ ಅನೇಕ ಬಿಜೆಪಿ ಶಾಸಕರು ಇದೀಗ ಬೌರಿಂಗ್​ ಆಸ್ಪತ್ರೆಗೆ ತೆರಳಿದ್ದಾರೆ

ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸಲಿಲ್ಲ. ಮೊಮ್ಮಗಳು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಬಿಎಸ್​​ ಯಡಿಯೂರಪ್ಪ ಮತ್ತು ಸಿಎಂ ಸೇರಿದಂತೆ ಅನೇಕ ಬಿಜೆಪಿ ಶಾಸಕರು ಇದೀಗ ಬೌರಿಂಗ್​ ಆಸ್ಪತ್ರೆಗೆ ತೆರಳಿದ್ದಾರೆ

 ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದೀಗ ಮೃತ ಸೌಂದರ್ಯ ಅವರ ಕರೆಗಳನ್ನು ಸಂಗ್ರಹಿಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆಗೆ ಮುಂದಾಗಿದ್ದಾರೆ

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಇದೀಗ ಮೃತ ಸೌಂದರ್ಯ ಅವರ ಕರೆಗಳನ್ನು ಸಂಗ್ರಹಿಸಿದ್ದು, ಎಲ್ಲಾ ಆಯಾಮದಲ್ಲೂ ತನಿಖೆಗೆ ಮುಂದಾಗಿದ್ದಾರೆ

WhatsApp
Facebook
Telegram
error: Content is protected !!
Scroll to Top