ದಕ್ಷಿಣಕನ್ನಡ (ಉಡುಪಿ): ಇಲ್ಲಿನ ಸರ್ವಿಸ್ ಬಸ್ ನಿಲ್ದಾಣದ ಬಳಿ ಲಾಡ್ಜ್ ಒಂದರಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಉಡುಪಿ ಪೊಲೀಸರು ಇಂದು ಬಂಧಿಸಿದ್ದು , ಇಬ್ಬರು ಹುಡುಗಿಯರನ್ನು ವಶಕ್ಕೆ ಪಡೆದಿದ್ದಾರೆ .
ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಪಕ್ಕಾ ಮಾಹಿತಿ ಮೇರೆಗೆ ಉಡುಪಿ ಸರ್ಕಲ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಮತ್ತು ಅವರ ತಂಡ ಶುಕ್ರವಾರ ದಾಳಿ ನಡೆಸಿ , ಇಬ್ಬರು ಹುಡುಗಿಯರು ಮತ್ತು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ .
ಬಂಧಿತ ಆರೋಪಿಗಳನ್ನು ಗುರುರಾಜ್ , ವಿಜಯ ಶೆಟ್ಟಿ , ಹೇಮಂತ್ , ಸಂದೀಪ್ ಮೊಗವೀರ ಎಂದು ಗುರುತಿಸಲಾಗಿದೆ . ಲಾಡ್ಜ್ ಮಾಲೀಕ ರಮೇಶ್ ಶೆಟ್ಟಿ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ .
ಪೊಲೀಸರಿಗೆ ಆರೋಪಿಗಳನ್ನು ಬಂಧಿಸಿ ಅವರ ಬಳಿ ಇದ್ದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ . ಕೆಲವು ಸಮಯದಿಂದ ಇಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂಬ ಮಾಹಿತಿ ಲಭಿಸಿದ್ದು , ಅದರ ಆಧಾರದಲ್ಲಿ ದಾಳಿ ನಡೆಸಿದ್ದಾರೆ .
ಈ ಯಾತ್ರಿ ನಿವಾಸ್ ಲಾಡ್ಜ್ ಉಡುಪಿ ನಗರಸಭೆಗೆ ಸೇರಿದ್ದು , ಈ ಲಾಡ್ಜ್ ನ್ನು ರಮೇಶ್ ಶೆಟ್ಟಿ ಎಂಬಾತ ನಡೆಸುತ್ತಿದ್ದ ಎನ್ನಲಾಗಿದೆ . ನಗರಸಭೆಯವರು ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ .