UP Assembly Polls: ಯೋಗಿ ಆದಿತ್ಯನಾಥ್ ನನ್ನನ್ನು ಕೊಲ್ಲಲು ಪ್ಲಾನ್ ಮಾಡಿದ್ದಾರೆ; ಓಂ ಪ್ರಕಾಶ್ ರಾಜಭಾರ್ ಗಂಭೀರ ಆರೋಪ

Om Prakash Rajbhar: ‘ಯೋಗಿ ಜೀ ನನ್ನನ್ನು ಕೊಲ್ಲಲು ಬಯಸುತ್ತಿದ್ದಾರೆ. ಅದಕ್ಕಾಗಿಯೇ ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ಅವರ ಗೂಂಡಾಗಳನ್ನು ಕಪ್ಪು ಕೋಟ್‌ನಲ್ಲಿ ಅಲ್ಲಿಗೆ ಕಳುಹಿಸಲಾಗಿತ್ತು’ ಎಂದು ಓಂ ಪ್ರಕಾಶ್ ರಾಜಭರ್ ಆರೋಪಿಸಿದ್ದಾರೆ.

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ನಡುವೆ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ (Om Prakash Rajbhar) ಇಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಘಾತಕಾರಿ ಆರೋಪಗಳನ್ನು ಮಾಡಿದ್ದಾರೆ. ವಾರಾಣಸಿಯ ಶಿವಪುರ ಕ್ಷೇತ್ರದಿಂದ ಎಸ್​ಬಿಎಸ್​ಪಿ ಅಭ್ಯರ್ಥಿ ಅರವಿಂದ್ ರಾಜ್‌ಭರ್ ಸೋಮವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ರಾಜ್‌ಭರ್ ಆರೋಪಿಸಿದ್ದಾರೆ. ಹಾಗೇ, ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ನನ್ನನ್ನು ‘ಕೊಲ್ಲಲು’ ಪ್ಲಾನ್ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ‘ಯೋಗಿ ಜೀ ನನ್ನನ್ನು ಕೊಲ್ಲಲು ಬಯಸುತ್ತಿದ್ದಾರೆ. ಅದಕ್ಕಾಗಿಯೇ ಬಿಜೆಪಿ ಮತ್ತು ಅವರ ಗೂಂಡಾಗಳನ್ನು ಕಪ್ಪು ಕೋಟ್‌ನಲ್ಲಿ ಅಲ್ಲಿಗೆ ಕಳುಹಿಸಲಾಗಿತ್ತು’ ಎಂದು ಓಂ ಪ್ರಕಾಶ್ ರಾಜಭರ್ ಆರೋಪಿಸಿದ್ದಾರೆ.

ಸಮಾಜವಾದಿ ಪಕ್ಷದ ಮಿತ್ರ ಮತ್ತು ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ ಓಂ ಪ್ರಕಾಶ್ ರಾಜ್‌ಭರ್ ಅವರು ಮಂಗಳವಾರ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಸ್ಫೋಟಕ ಆರೋಪವನ್ನು ಮಾಡಿದ್ದಾರೆ.

ಓಂ ಪ್ರಕಾಶ್ ರಾಜ್‌ಭರ್ ಅವರ ಎಸ್‌ಬಿಎಸ್‌ಪಿ 2017ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ರಾಜ್‌ಭರ್ ನಿರ್ಧರಿಸಿದ ನಂತರ ಎರಡು ಪಕ್ಷಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು.

WhatsApp
Facebook
Telegram
error: Content is protected !!
Scroll to Top