ಹಿಂದೂ ಜಾಗರಣ ವೇದಿಕೆಯ ಮುಖಂಡ ದಿನೇಶ ನಾಯ್ಕ ಇನ್ನಿಲ್ಲ; ಅನಿರೀಕ್ಷಿತ ಹೃದಯಾಘಾತ ದಿಂದ ದಿನೇಶ ನಾಯ್ಕ ನಿಧನ.

ಭಟ್ಕಳ : ಇಲ್ಲಿನ ಹಿಂದೂ ಜಾಗರಣ ವೇದಿಕೆಯ ಮುಖಂಡ ದಿನೇಶ ಎಂ.ನಾಯ್ಕ ಚೌಥನಿ ( 43 ) ಅವರು ತೀವ್ರ ಹೃದಯಾಘಾತದಿಂದ ಶನಿವಾರ ಸಂಜೆ ನಿಧನರಾದರು . ಶನಿವಾರ ಮಧ್ಯಾಹ್ನ ಊಟ ಮಾಡಿದ ನಂತರ ಇವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತಪಾಸಣೆ ನಡೆಸಿ , ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸುವಾಗಲೇ ಕೊನೆಯುಸಿರೆಳೆದಿದ್ದಾರೆ .

ಮೃತರು ಪತ್ನಿ, ಇಬ್ಬರು ಮಕ್ಕಳು , ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ . ಅಪಾರ ಬಂಧುಬಳಗವನ್ನು ನಿಧನಕ್ಕೆ ಹಿಂದೂ ಜಾಗರಣಾ ವೇದಿಕೆಯ ಮುಖಂಡರು ಗಣ್ಯರು ಸಂತಾಪ ಸೂಚಿಸಿದ್ದಾರೆ .

WhatsApp
Facebook
Telegram
error: Content is protected !!
Scroll to Top