ನಾವು ಉಕ್ರೇನ್ ಸಂಬಂಧಿಸಿದ ಬೆಳವಣಿಗೆಗಳನ್ನು ನಿಕಟವಾಗಿ ಗಮನಿಸುತ್ತಿದ್ದೇವೆ. ಉಕ್ರೇನ್-ರಷ್ಯಾ ಗಡಿಯ ಸನ್ನಿವೇಶ ಹಾಗೂ ರಷ್ಯನ್ ಒಕ್ಕೂಟ ಸಂಬಂಧಿತ ಘೋಷಣೆಯ ಮೇಲೂ ಗಮನ ಹರಿಸುತ್ತಿದ್ದೇವೆ ಎಂದು ಭಾರತದ ಕಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ ವಿಶ್ವಸಂಸ್ಥೆ ತಿಳಿಸಿದ್ದಾರೆ.
ನ್ಯೂಯಾರ್ಕ್: ರಷ್ಯಾ ಉಕ್ರೇನ್ ಮೇಲೆ ನಡೆಸಬಹುದಾದ ದಾಳಿ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮಂಗಳವಾರ ತುರ್ತು ಸಭೆ ನಡೆಸಿದೆ. ರಷ್ಯಾ-ಉಕ್ರೇನ್ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಬಗ್ಗೆ ಭಾರತ ಸಭೆಯಲ್ಲಿ ಆತಂಕ ವ್ಯಕ್ತಪಡಿಸಿದೆ.
ಉಕ್ರೇನ್ ಗಡಿಯಲ್ಲಿ ಹುಟ್ಟಿಸುತ್ತಿರುವ ಉದ್ವಿಗ್ನತೆ ಆತಂಕಕರವಾಗಿದೆ. ಈ ಬೆಳವಣಿಗೆಗಳು ಶಾಂತಿ ಹಾಗೂ ಭದ್ರತೆಗೆ ಅಪಾಯವಾಗಿದೆ ಎಂದು ಹೇಳಿದ್ದಾರೆ.
ಉಕ್ರೇನ್ ಮೇಲೆ ರಷ್ಯಾ ನಡೆಸಬಹುದಾದ ದಾಳಿ ಕುರಿತಂತೆ ಅಮೆರಿಕ ಹಾಗೂ ಮಿತ್ರ ರಾಷ್ಟ್ರಗಳು ತುರ್ತು ಸಭೆ ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಮನವಿ ಮಾಡಿತ್ತು. ಉಕ್ರೇನ್ ಮೇಲೆ ರಷ್ಯಾದ ಸಂಭವನೀಯ ಆಕ್ರಮಣ ತಡೆಯಲು ರಾಜತಾಂತ್ರಿಕ ಪ್ರಯತ್ನಗಳು ತಡೆಯುತ್ತಿವೆ.
ಅಮೆರಿಕ ಮತ್ತು ಯುರೋಪ್ ದೇಶಗಳು ರಷ್ಯಾ ವಿರುದ್ಧವಾಗಿದ್ದರೆ ಭಾರತದ ನಡೆ ಏನು ಎನ್ನುವು ಕುತೂಹಲ ಇತ್ತು. ಆದರೆ ಭಾರತ ಯಾವ ಕಡೆಯೂ ಇಲ್ಲದೇ ಶಾಂತಿ ಮಾತುಕತೆಯಿಂದ ಸಮಸ್ಯೆ ಪರಿಹರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.