ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ – 7ನೇ ಆರೋಪಿ ಅರೆಸ್ಟ್‌

ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲಾನಿ ಎಂಬಾತನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಹರ್ಷನ ಕೊಲೆ ಬಳಿಕ ಜಿಲಾನಿ ಕಾರು ಚಾಲನೆ ಮಾಡಿದ್ದ. ಆರೋಪಿಗಳನ್ನು ಸ್ವಿಫ್ಟ್‌ ಕಾರಿನಲ್ಲಿ ಕರೆದೊಯ್ದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು, ಜಿಲಾನಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತರು ಶಿವಮೊಗ್ಗದ ಕ್ಲಾರ್ಕ್‌ ಪೇಟೆ ನಿವಾಸಿಗಳಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಕೇಸ್ ಸಂಬಂಧ ಎ1 ಆರೋಪಿ ಖಾಸಿಫ್‌ ನೀಡಿದ ಮಾಹಿತಿ ಮೇರೆಗೆ 6ನೇ ಆರೋಪಿ ಮುಜಾಹಿದ್ ಮುಜ್ಜುನನ್ನು ಬಂಧಿಸಲಾಗಿತ್ತು. 

WhatsApp
Facebook
Telegram
error: Content is protected !!
Scroll to Top