ಕುಮಟಾ: ಮಕ್ಕಳಾಗಿಲ್ಲ ಎಂಬ ಚಿಂತೆಯಲ್ಲಿ ವಿವಾಹಿತನೋರ್ವ ಮನನೊಂದು ನೇಣಿಗೆ ಶರಣಾಗಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಪಟ್ಟಣದ ಹಳೇ ಹೆರವಟ್ಟಾದಲ್ಲಿ ಈ ಘಟನೆ ನಡೆದಿದ್ದು, ಹೆರವಟ್ಟಾ ನಿವಾಸಿ ಮನೋಜ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ. ಈತ ವಿವಾಹವಾಗಿ 9 ವರ್ಷಗಳು ಕಳೆದರೂ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ವಿಪರೀತ ಬೇಸರಗೊಂಡಿದ್ದ.
ಈ ಸಂಬoಧ ಪತ್ನಿ ಜೊತೆ ಮುನಿಸಿಕೊಂಡಿದ್ದ ಎನ್ನಲಾಗಿದೆ. ಪತ್ನಿಯು ತವರು ಮನೆಗೆ ತೆರಳಿದ್ದಳಿಂದ ಇನ್ನಷ್ಟು ಮನನೊಂದ ಮನೋಜ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳಾಗಿಲ್ಲ ಎಂಬ ಚಿಂತೆಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಕುಮಟಾ ಮೂಲದ ವ್ಯಕ್ತಿ.!
WhatsApp
Facebook
Telegram