ಭಟ್ಕಳ;ಹೆಬಳೆ ಬೇಲೆಗದ್ದೆ ಒಂದನೇ ಕ್ರಾಸ್ ಸಮೀಪ ರಸ್ತೆಅಪಘಾತ..!

ಭಟ್ಕಳ : ಪ್ಯಾಸೆಂಜರ್ ಆಟೋ ರಿಕ್ಷಾಕ್ಕೆ ಸ್ಕೂಟಿ ಡಿಕ್ಕಿ ಹೊಡ ಪ್ರರಿಣಾಮ ಸ್ಕೂಟಿ ಚಾಲಕ ಮುಂಡಳ್ಳಿ ಗ್ರಾಮದ ನಿವಾಸಿ ಗಣೇಶ ಜಟ್ಟಾ ಸಾವನ್ನಪ್ಪಿರುವ ಘಟನೆ ಹೆಬಳೆ ಬೇಲಿಗದ್ದೆ ಒಂದನೇ ಕ್ರಾಸ್ ಸಮೀಪ ನಡೆದಿದೆ .

ಪ್ಯಾಸೆಂಜರ್ ಆಟೋ ರಿಕ್ಷಾ ಚಾಲಕ ಗಣಪತಿ ನಾಯ್ಕ ಭಟ್ಕಳ ಕಡೆಯಿಂದ ತೆಂಗಿನಗುಂಡಿ ಕಡೆಗೆ ಅತಿವೇಗ ಹಾಗೂ ನಿಷ್ಕಾಳಜಿತನದಿಂದ ಆಟೋವನ್ನು ಚಲಾಯಿಸಿಕೊಂಡು ಬಂದಿದ್ದ ಎನ್ನಲಾಗಿದೆ .

ವೇಗವನ್ನು ನಿಯಂತ್ರಿಸಲಾಗದೆ ಹೆಬಳೆ ಬೇಲೆಗದ್ದೆ ಒಂದನೇ ಕ್ರಾಸ್ ಸಮೀಪ ತೆಂಗಿನಗುಂಡಿ ಕಡೆಯಿಂದ ಭಟ್ಕಳದ ಕಡೆಗೆ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ದಿನೇಶ ನಾಯ್ಕ ಈತನಿಗೆ ಹಣೆ ಭಾಗಕ್ಕೆ ಮತ್ತು ಕೈ ಬೆರಳಿಗೆ ಹಾಗೂ ಮುಖದ ಭಾಗಕ್ಕೆ ಗಾಯಗಳಾಗಿವೆ .

ಸ್ಕೂಟಿಯ ಹಿಂಬದಿ ಸವಾರ ಗಣೇಶ ನಾಯ್ಕ ಈತನಿಗೆ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಪೆಟ್ಟಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯುವ ವೇಳೆ ಅಪಘಾತದಲ್ಲಿ ಯುವಕನ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆ ಯುವಕ ಸಾವನ್ನಪ್ಪಿದ್ದಾನೆ . ಈ ಕುರಿತು ಪ್ಯಾಸೆಂಜರ್ ಆಟೋ ರಿಕ್ಷಾ ಚಾಲಕನ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

WhatsApp
Facebook
Telegram
error: Content is protected !!
Scroll to Top