ಉಡುಪಿಯಲ್ಲಿ ಸ್ಕೂಟರ್‌ ಗೆ ಬಸ್ ಡಿಕ್ಕಿ : ತಂದೆ, ಮಗಳು ದಾರುಣ ಸಾವು..!

ದಕ್ಷಿಣ ಕನ್ನಡ(ಉಡುಪಿ)ಬಸ್ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ರಸ್ತೆ ಅಫಘಾತದಲ್ಲಿ ತಂದೆ ಮತ್ತು ಮಗಳು ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಬೆಳಗ್ಗೆ ಸಂತೆಕಟ್ಟೆ ಜಂಕ್ಷನ್‌ನಲ್ಲಿ ಸಂಭವಿಸಿದೆ. ಮೃತರನ್ನು ಗರಡಿಮಜಲು ನಿವಾಸಿಗಳಾದ ಗಣೇಶ್‌ ಪೈ (58) ಹಾಗೂ ಅವರ ಪುತ್ರಿ ಗಾಯತ್ರಿ ಪೈ ಎಂದು ಗುರುತಿಸಲಾಗಿದೆ.

ಬುಧವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಬಂದ ಮಗಳನ್ನು ಸ್ಕೂಟರ್‌ನಲ್ಲಿ ತಂದೆ ಕರೆದೊಯ್ಯುತ್ತಿದ್ದ ರಸ್ತೆ ಅಪಘಾತ ಸಂಭವಿಸಿದೆ‌. ಘಟನೆಯಿಂದ ಗಂಭೀರವಾಗಿ‌ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸಂತೆಕಟ್ಟೆ ಜಂಕ್ಷನ್ ರಸ್ತೆ ಕ್ರಾಸ್ ಮಾಡುತ್ತಿದ್ದಾಗ ಕೊಲ್ಲೂರು ಕಡೆ ಸಾಗುತ್ತಿದ್ದ ಕೇರಳ‌ ರಾಜ್ಯದ ಸಾರಿಗೆ ಎಸಿ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಗಣೇಶ್‌ ಪೈ ಅವರು ಕರಾವಳಿ ಕಾವಲು ಪಡೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಗಣೇಶ್‌ ಪೈ ಅವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಉಡುಪಿ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.

WhatsApp
Facebook
Telegram
error: Content is protected !!
Scroll to Top