ದೇಶ:ಆಸ್ತಿ ವಿಚಾರಕ್ಕೆ ತಂದೆಯ ಕತ್ತು ಹಿಸುಕಿ ಸ್ವಂತ ಮಗನೇ ಕೊಲೆಗೈದು ಶವವನ್ನು ಕಂಬಳಿಯಲ್ಲಿ ಸುತ್ತಿ ಬಳಿಕ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮಥುರಾದ ನರ್ಹೌಲಿಯಲ್ಲಿ ನಡೆದಿದೆ.
ಅಮೃತ್ ಲಾಲ್ (55) ಮೃತ ರ್ದುದೈವಿ. ಕಳೆದ ಒಂದು ವಾರದ ಹಿಂದೆ ಅಮೃತ್ ಲಾಲ್ ಅವರ ಪತ್ನಿ ಆಶಾದೇವಿ ತಂದೆ-ಮಗನನ್ನು ಬಿಟ್ಟು ತವರಿಗೆ ತೆರಳಿದ್ದರು. ತಂದೆಯೊಂದಿಗೆ ಏಕಾಂಗಿಯಾಗಿದ್ದ ಮಗ ವಿನೀತ್, ಅಮೃತ್ ಲಾಲ್ಗೆ ಮನೆ ಮಾರಾಟ ಮಾಡುವಂತೆ ಒತ್ತಡ ಹೇರಲು ಆರಂಭಿಸಿದ್ದಾನೆ. ಇದಕ್ಕೆ ಅಮೃತ್ ಲಾಲ್ ಅವರು ನಿರಾಕರಿಸಿ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ವಿನೀತ್, ಅಪ್ಪನ ಕತ್ತನ್ನು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಕಂಬಳಿಯಲ್ಲಿ ಸುತ್ತಿ ಸುಟ್ಟು ಹಾಕಿದ್ದಾನೆ.
ಈ ಘಟನೆ ಕುರಿತಂತೆ ತನಿಖೆ ವೇಳೆ ಆಶಾದೇವಿ ಅವರು, ವಾಸಿಸುತ್ತಿದ್ದ ಮನೆಯನ್ನು ಮಾರಾಟ ಮಾಡಲು ವಿನೀತ್ ಬಯಸಿದ್ದ. ವಿನೀತ್ ಈಗಾಗಲೇ ತಮ್ಮ 100 ಚದರ ಮೀಟರ್ನಷ್ಟು ನಿವೇಶನ ಮಾರಾಟ ಮಾಡಿದ್ದಾನೆ. ಇದು ಕುಟುಂಬದಲ್ಲಿ ವಿವಾದಕ್ಕೆ ಕಾರಣವಾಗಿತ್ತು ಮತ್ತು ವಿನೀತ್ ಆಗಾಗ ಮನೆಯನ್ನು ಮಾರಾಟ ಮಾಡಿ ತನಗೆ ಪಾಲು ನೀಡುವಂತೆ ಒತ್ತಾಯಿಸುತ್ತಿದ್ದ.
ಜೊತೆಗೆ ನಾಲ್ಕು ವರ್ಷಗಳ ಹಿಂದೆ ಕಿರಿಯ ಮಗ ನೆಹನಾ ಆತ್ಮಹತ್ಯೆ ಮಾಡಿಕೊಂಡಿದ್ದು ಸಹ ಕುಟುಂಬದಲ್ಲಿ ಕಲಹ ಉಂಟಾಗಲು ಕಾರಣವಾಗಿತ್ತು ಎಂದು ಪೊಲೀಸರಿಗೆ ತಿಳಿಸಿದ್ದಾರೆ