ನಾನು ಕೆಲಸ ಮಾಡಿಲ್ಲ ಅಂತಾ ಹೇಳಿದ್ರೆ ಸುಮ್ಮನಿರಲ್ಲ-ಸಂಸದೆ ಸುಮಲತಾ.

ಮಂಡ್ಯ: ಮಂಡ್ಯದಲ್ಲಿ ಕೆಲಸಕ್ಕಿಂತ ಕ್ರೆಡಿಟ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ನಾನು ಮಾಡಿರುವುದನ್ನು ಇಲ್ಲ ಅಂದಾಗ ಸುಮ್ಮನಿರಲು ಸಾಧ್ಯವಿಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಕೆಲಸ ಮಾಡಲ್ಲ. ನಿಜ ಹೇಳಲು ಭಯ ಏಕೆ..? ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು,  ಅವರ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೋ ಗೊತ್ತಿಲ್ಲ. ಶಿಂಷಾ ಸೇತುವೆ ವಿಚಾರ ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ ಎಂದರು.

ಇನ್ನು ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸ ಮಾಡಿಲ್ಲ ಅಂತಾ ಹೇಳಿದರೆ ನಾನು ಸುಮ್ಮನಿರಲ್ಲ. ಟಾರ್ಗೆಟ್ ಮಾಡುವುದು ಮೊದಲ ದಿನದಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರು ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ ಜನ ನನ್ನ ಪರ ಮಾತನಾಡುತ್ತಾರೆ ಎನ್ನುವ ಭಯ ಎಂದಿದ್ದಾರೆ.

WhatsApp
Facebook
Telegram
error: Content is protected !!
Scroll to Top