ಭಟ್ಕಳ :ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಹೊಡೆದು ವ್ಯಕ್ತಿ ಸಾವು..!

ಭಟ್ಕಳ: ಪಾದಾಚಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ, ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ತಾಲೂಕಿನ ತೆರ್ನಮಕ್ಕಿ ಸಭಾತಿ ಕ್ರಾಸ್ ಸಮೀಪ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯನ್ನು ದಾಟುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಮೃತರನ್ನು ಕೈಕಿಣಿ ತರ್ನಮಕ್ಕಿ ಕೆಳಗಿನ ಮನೆ ನಿವಾಸಿ ಲಕ್ಷ್ಮಣ ತಂದೆ ಮಂಜಪ್ಪ ನಾಯ್ಕ (64) ಎಂದು ಗುರುತಿಸಲಾಗಿದೆ . ಗಂಭೀರವಾರ ಗಾಯಗೊಂಡಿದ್ದ ಇವರನ್ನು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರಕ್ಕೆ ಕರೆದೊಯ್ಯುತ್ತಿರುವಾಗಲೇ ಭಟ್ಕಳ ಬೆಳಕೆ ಸಮೀಪ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

WhatsApp
Facebook
Telegram
error: Content is protected !!
Scroll to Top