ಇತ್ತೀಚಿಗೆ ಯುದ್ಧ ಬಾಧಿಕ ಉಕ್ರೇನ್ ನಲ್ಲಿ ರಷ್ಯಾದ ಶೆಲ್ ದಾಳಿಯಿಂದ ಮೃತಪಟ್ಟ ರಾಜ್ಯದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಗೌಡ ಗ್ಯಾನಗೌಡರ್ ಪಾರ್ಥಿವ ಶರೀರ ಇದೇ ತಿಂಗಳ 21 ಸೋಮವಾರದಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಸಾಧ್ಯತೆಯಿದೆ.
ಬೆಂಗಳೂರು: ಇತ್ತೀಚಿಗೆ ಯುದ್ಧ ಬಾಧಿಕ ಉಕ್ರೇನ್ ನಲ್ಲಿ ರಷ್ಯಾದ ಶೆಲ್ ದಾಳಿಯಿಂದ ಮೃತಪಟ್ಟ ರಾಜ್ಯದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಗೌಡ ಗ್ಯಾನಗೌಡರ್ ಪಾರ್ಥಿವ ಶರೀರ ಇದೇ ತಿಂಗಳ 21 ಸೋಮವಾರದಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುವ ಸಾಧ್ಯತೆಯಿದೆ.
ಪಾರ್ಥಿವ ಶರೀರ ರವಾನೆಗೆ ಅಗತ್ಯವಾದ ಎಲ್ಲಾ ಕಾಗದ ಕೆಲಸಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಕರ್ನಾಟಕ ಸರ್ಕಾರ ಶನಿವಾರ ಹೇಳಿದೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ದಿ. 21-3-2022, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದೆ ಎಂದು ತಿಳಿಸಿದ್ದಾರೆ.