ಸಿದ್ದಾಪುರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ

ಸಿದ್ದಾಪುರ:- ಹೋರಾಟದಲ್ಲಿ ಅಚಲ ವಿಶ್ವಾಸ, ನಂಬಿಕೆ ಇಡಬೇಕು. ದೇಶದಲ್ಲಿ ಸಾಮಾಜಿಕ ನ್ಯಾಯ ಕೊಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯ. ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಆಧಿಕಾರಕ್ಕೆ ತರಲು ತಳಮಟ್ಟದಿಂದ ಸಂಘಟನೆ ಮಾಡಬೇಕು ಎಂದು ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಕಾರ್ಯಕರ್ತರಿಗೆ ಕರೆ ನೀಡದರು.

ಅವರು ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೇಡ್ಕಣಿ ಯಿಂದ ಸಿದ್ದಾಪುರ ದ ವರೆಗೆ ನಡೆದ ಪಾದಯಾತ್ರೆಯ ನಂತರ ಪಟ್ಟಣದ ರಾಘವೇಂದ್ರ ಮಠದ ಸಭಾ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಮೀಸಲಾತಿಯನ್ನು ನೀಡಿದ್ದೇವೆ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಿಗೆ ಮನವರಿಕೆ ಮಾಡಿಕೊಟ್ಟರೆ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಬೆಳಸಲು ಸಾಧ್ಯವಾಗುತ್ತದೆ ಎಂದರು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿಗಳಾದ ಐವಾನ್ ಡಿಸೋಜಾ ಮಾತನಾಡಿ ಈ ದೇಶದ ಸ್ವತಂತ್ರವನ್ನು ನಿರಂತರ ಕಾಪಾಡುವಂತಹ ಒಂದು ಹೊಣೆಗಾರಿಕೆ ಇದ್ದರೆ ಅದು ಕಾಂಗ್ರೆಸ್ ನಿಂದ ಮಾತ್ರ ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ ಮಾತನಾಡಿ ಸಂಘಟನೆಯಿಂದಲೇ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಾಮಾನ್ಯ ಜನರಿಗೆ ಸಮಸ್ಯೆಗೆ ಪರಿಹಾರ ನೀಡಲಿದೆ ಎಂದರು.
ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿ ಗಳಾದ ಸುಧೀರ್ ಕುಮಾರ ಮುರೊಳ್ಳಿ, ಕೆಪಿಸಿಸಿ ಕಾರ್ಯದರ್ಶಿ ರಾಜನಂದಿನಿ,
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ಜಿಲ್ಲಾ ಮಹಿಳಾ ಅಧ್ಯಕ್ಷೆ ಸುಜಾತಾ ಗಾಂವ್ಕರ್
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ. ಸೇರಿದಂತೆ ರಾಜ್ಯ, ಜಿಲ್ಲೆ, ತಾಲೂಕಿನ ಮುಖಂಡರು ಉಪಸ್ಥಿತರಿದ್ದರು.

WhatsApp
Facebook
Telegram
error: Content is protected !!
Scroll to Top