ಸಿದ್ದಾಪುರ ತಾಲೂಕಿನಲ್ಲಿ ಸುರಿದ ಭಾರಿ ಮಳೆಗೆ ಯುವಕನ ದುರ್ಮರಣ

ಚಂದ್ರಶೇಕರ ನಾರಾಯಣ ಹರಿಜನ ಮೃತ ದುರ್ದೈವಿ

ಸಿದ್ದಾಪುರ :- ತಾಲೂಕಿನಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಪದ್ಮಾವತಿ ನಾರಾಯಣ ಹರಿಜನ್ ರವರ ಮನೆ ಗೋಡೆ ಕುಸಿದು ಯವಕ ಮೃತ ಪಟ್ಟ ಘಟನೆ ತಾಲೂಕಿನ ಕ್ಯಾದಿಗಿ ಪಂಚಾಯತನಲ್ಲಿ ನಡೆದಿದೆ. ಚಂದ್ರಶೇಖರ ನಾರಾಯಣ ಹರಿಜನ್ ( 21) ಮೃತ ಯುವಕನಾಗಿದ್ದಾನೆ. ರಾತ್ರಿ ಸುರಿದ ಮಳೆಗೆ ಮನೆಗೋಡೆ ಕುಸಿದು ಯುವಕನ ಮೇಲೆ ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಆತನನ್ನು ಸರಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆ ಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಗೆ ಕೊಂಡೊಯ್ಯಲಾಯಿತು. ನಂತರ ವೈದ್ಯರ ಸಲಹೆ ಮೇರೆಗೆ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿರುವುದಾಗಿ ಎಂದು ತಿಳಿದು ಬಂದಿದೆ.
ತಹಶಿಲ್ದಾರ ಸಂತೋಷ ಭಂಡಾರಿ, ಆರ್ ಆಯ್ ಯಶವಂತ ಆಪ್ಪಿನಬೈಲ್, ಮನೆ ಬಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp
Facebook
Telegram
error: Content is protected !!
Scroll to Top