ಸಿದ್ದಾಪುರ ದಲ್ಲಿ ಆಮ್ ಆದ್ಮಿ ಪಕ್ಷದ ಕಚೇರಿ ಉದ್ಘಾಟನೆ.


ಸಿದ್ದಾಪುರ:- ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು ಅಭಿವೃದ್ಧಿ ಹೆಸರಲ್ಲಿ ಲೂಟಿ ಮಾಡುತ್ತಿದ್ದಾರೆ. ದಿನ ಬಳಕೆಯ ವಸ್ತುಗಳ ಬೆಲೆಯನ್ನು ಏರಿಸಿ ರೈತರು, ಜನಸಾಮಾನ್ಯರ ಬದುಕು ದುಸ್ಥರವಾಗಿದೆ. ದೇಶ ರಾಜ್ಯ ದಲ್ಲಿ ಆಮ್ ಆದ್ಮಿ ಪಕ್ಷ ದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ವೀರಭದ್ರ ನಾಯ್ಕ ಹೇಳಿದರು.
ಅವರು ಪಟ್ಟಣದಲ್ಲಿ ಸಿರ್ಸಿ-ಸಿದ್ದಾಪುರ ವಿಧಾನ ಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಸಿದ್ದಾಪುರ್ ಕಚೇರಿಯನ್ನು ಪಟ್ಟಣದ ಅಶೋಕ ರಸ್ತೆ ಎವ್ ಬಿ ಹೊಸೂರು ಮನೆಯ ಮಹಡಿ ಮೇಲೆ ಉದ್ಘಾಟಿಸಿದ ಕಾರ್ಯಕ್ರಮ ದಲ್ಲಿ ಮಾತನಾಡಿದರು.
ಸಿರ್ಸಿ ಸಿದ್ದಾಪುರ ಕ್ಷೇತ್ರದಲ್ಲಿ ರೈತ ಸಂಘದವರು ಆಮ್ ಆದ್ಮಿ ಪಾರ್ಟಿಯೊಂದಿಗೆ ವಿಲೀನವಾಗಿದ್ದೇವೆ. ದೇಶದಲ್ಲಿ ಭ್ರಷ್ಟಾಚಾರವನ್ನ ತೊಲಗಿಸಲು ಆಮ್ ಆದ್ಮಿ ಪಣತೊಟ್ಟಿರುವ ದರಿಂದ ಸಿರ್ಸಿ ಸಿದ್ದಾಪುರ ಕ್ಷೇತ್ರದಲ್ಲಿ ನಮ್ಮ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರುತ್ತೇವೆ ಎಂದರು.
“ಕರ್ನಾಟಕ ಸೇವಾ ರತ್ನ ಪ್ರಶಸ್ತಿ” ಪುರಸ್ಕೃತ ಶಂಕರಮೂರ್ತಿ ಕತ್ತಿ ಯವರನ್ನು ಕಾರ್ಯಕ್ರಮ ದಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿದ ಶಂಕರಮೂರ್ತಿ ಕತ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮನುಷ್ಯ ಹುಟ್ಟಿದ ಮೇಲೆ ಸಮಾಜಕ್ಕೆ ತನ್ನಿಂದಾದ ಸೇವೆ ನೀಡಬೇಕು. ನಾನು ಮಾಡಿದ ಅಳಿಲು ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿದ್ದು ತುಂಬಾ ಸಂತೋಷ ವಾಗಿದೆ ಎಂದರು.
ಆಮ್ ಆದ್ಮಿ ಪಕ್ಷದ ತಾಲೂಕಾಧ್ಯಕ್ಷ ಲಕ್ಷ್ಮಣ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ಪಕ್ಣದ ಪ್ರಮುಖರಾದ ಅಬ್ಜಲ್, ಮನೋಹರ ನಾಯ್ಕ, ಹನೀಫ್, ವಿನಾಯಕ ನಾಯ್ಕ ಹಲಸಿಮನೆ, ಮೊದಲಾದವರು ಉಪಸ್ಥಿತರಿದ್ದರು.
ಆಯ್ ಸಿ ನಾಯ್ಕ ಹುಲಿಮನೆ ಸ್ವಾಗತಿಸಿದರು.
ರಾಘವೇಂದ್ರ ನಾಯ್ಕ ಕಾವಚೂರ್ ನಿರೂಪಿಸಿದರು.

WhatsApp
Facebook
Telegram
error: Content is protected !!
Scroll to Top