ಸಿದ್ದಾಪುರ :ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಾಲೂಕಿನಿಂದ ವರ್ಗಾವಣೆಗೊಂಡ ಕ್ಷೆತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಇವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು.ಇದೆ ಸಂದರ್ಭದಲ್ಲಿ ತಾಲೂಕಿಗೆ ಆಗಮಿಸಿದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಆಯ್. ನಾಯ್ಕ ಇವರನ್ನು ಸ್ವಾಗತಿಸಲಾಯಿತು.
ವೇದಿಕೆಯಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಚೈತನ್ಯ ಕುಮಾರ್ ಕೆ.ಎಂ, ಅಕ್ಷರ ದಾಸೋಹ ನಿರ್ದೇಶಕರಾದ ಭೂಮೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಸತೀಶ ಹೆಗಡೆ, ಕಾರ್ಯದರ್ಶಿ ಗುರುರಾಜ ನಾಯ್ಕ, ವ್ಯವಸ್ಥಾಪಕರಾದ ಎಂ. ಬಿ. ನಾಯ್ಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಗೋಪಾಲ ನಾಯ್ಕ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಆರ್. ಆರ್. ನಾಯ್ಕ, ಲೋಕೇಶ ನಾಯ್ಕ,ಎಂ. ವಿ. ನಾಯ್ಕ, ಮಹೇಶ ಹೆಗಡೆ ಇತರರಿದ್ದರು.