ದಂತ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಭಟ್ಕಳದ ಹಿರಿಯ ದಂತ ವೈದ್ಯ ಡಾ. ಕೀರ್ತಿ ಶೆಟ್ಟಿ ಆಯ್ಕೆ

ಭಟ್ಕಳ: ಭಾರತೀಯ ದಂತವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾಗಿ ಭಟ್ಕಳದ ಹಿರಿಯ ದಂತ ವೈದ್ಯ ಡಾ. ಕೀರ್ತಿ ಶೆಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ದಂತ ವೈದ್ಯಕೀಯ ಸಂಘದ ಸಭೆಯಲ್ಲಿ ಆಯ್ಕೆ ನಡೆಯಿತು.

ಪದಾಧಿಕಾರಿಗಳ ಆಯ್ಕೆಯಲ್ಲಿ ೨೦೨೪ನೇ ಸಾಲಿನ ಉಪಾಧ್ಯಕ್ಷರಾಗಿ ಭಟ್ಕಳದ ಡಾ. ಕೀರ್ತಿ ಶೆಟ್ಟಿ ಅವರು ಆಯ್ಕೆಯಾಗಿದ್ದು, ಈ ಹಿಂದೆ ಇವರು ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದು, ೨೦೧೩ರಲ್ಲಿ ಭಾರತೀಯ ದಂತ ವೈದ್ಯಕೀಯ ಸಂಘದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದನ್ನು ಸ್ಮರಿಸಬಹುದು.

WhatsApp
Facebook
Telegram
error: Content is protected !!
Scroll to Top