ಅನಾಮದೇಯ ವ್ಯಕ್ತಿಯಿಂದ ಚಾಕು ಇರಿದು ಹತ್ಯೆ
ಸುದ್ದಿಬಿಂದು ಬ್ಯೂರೋ ವರದಿ
ಕಾರವಾರ : ವಾಯುವಿಹಾರಕ್ಕೆ ಹೋಗುತ್ತಿದ್ದ ನಗರ ಸಭೆಯ ಮಾಜಿ ಸದಸ್ಯ ನೋರ್ವನಿಗೆ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಇಂದು ಬೆಳ್ಳಂಬೆಳ್ಳಿಗ್ಗೆ ನಗರದ ಬಿಎಸ್ಎನ್ಎಲ್ ಕಚೇರಿ ಸಮೀಪದಲ್ಲಿ ನಡೆದಿದೆ.
ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆಯ ಮಾಜಿ ಸದಸ್ಯರಾಗಿದ್ದಾರೆ.ಇವರು ಎಂದಿನಂತೆ ಇಂದು ಬೆಳಿಗ್ಗೆ ವಾಯುವಿಹಾರಕ್ಕೆ ಮುಗಿಸಿ ವಾಪಸ್ ಬೈಕ್ ಮೇಲೆ ಮನೆಗೆ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಚಾಕು ಇರಿದ್ದಿದ್ದಾರೆನ್ನಲಾಗಿದೆ. ಇದರಿಂದ ಅವರು ಬೈಕ್ನಿಂದ ಕೆಳಗೆ ಬಿದ್ದಿದ್ದು, ತಕ್ಷಣ ಅವರನ್ನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ನೀಡಿವ ಮೊದಲೆ
ಸತೀಶ್ ಕೋಳಂಕರ್ ಕೊನೆಯುಸಿರೆಳೆದಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆಯಾಗಿರಬಹುದು ಎಂದು ಶಂಕಿಸಲಾಗಿದೆ.ಘಟನಾ ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಕಾರವಾರ ನಗರ ಠಾಣಾ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.